ಸರಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು - ಸುಪ್ರೀಂ ಕೋರ್ಟ್
ನವದೆಹಲಿ: ಸರಕಾರವನ್ನು ಟೀಕೆ ಮಾಡುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶುಕ್ರವಾರದ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರ್ಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು ಕ್ರಿಮಿನಲ್ ಮೊಕದ್ದಮೆಗಳೊಂದಿಗೆ ಗುರಿ ಪಡಿಸಬಾರದು ಎಂದು ಹೇಳಿದೆ.
ಪತ್ರಕರ್ತರ ಬರವಣಿಗೆಯನ್ನು ಸರ್ಕಾರದ ಟೀಕೆ ಎಂದು ಪರಿಗಣಿಸಿದ ಮಾತ್ರಕ್ಕೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಬಾರದು ಎಂದು ಹೇಳಿದೆ.
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ, ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಗೌರವಿಸಲಾಗುತ್ತದೆ. ಪತ್ರಕರ್ತರ ಹಕ್ಕುಗಳನ್ನು ಸಂವಿಧಾನದ 19(1)(ಎ) ಅಡಿಯಲ್ಲಿ ರಕ್ಷಿಸಲಾಗಿದೆ. ಪತ್ರಕರ್ತರ ಬರಹಗಳನ್ನು ಸರ್ಕಾರದ ಟೀಕೆ ಎಂದು ಭಾವಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹಾಕಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಉತ್ತರ ಪ್ರದೇಶದಲ್ಲಿ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಈ ತೀರ್ಪು ಬಂದಿದೆ ಮತ್ತು ‘ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಪತ್ರಕರ್ತನ ಮನವಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದು, ನ್ಯಾಯಾಲಯವು ನಾಲ್ಕು ವಾರಗಳ ನಂತರ ವಿಚಾರಣೆಯನ್ನು ಮುಂದೂಡಿದೆ.