ಹುಬ್ಬಳ್ಳಿ: ಕುಂಟುತ್ತಲೇ ನಡೆದು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ಹುತಾತ್ಮದಿನದ ಅಂಗವಾಗಿ ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಂಟುತ್ತಲೇ ನಡೆದು ಹುತಾತ್ಮ ಪೊಲೀಸರಿಗೆ ಪುಷ್ಪನಮನ ಸಲ್ಲಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾನಗಲ್ ಉಪಚುನಾವಣೆ ಪ್ರಚಾರ ಮುಗಿಸಿ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದರು. ಹೀಗಾಗಿ ನಿನ್ನೆ ಹೆಚ್ಚಿನ ಓಡಾಟದಿಂದ ಸಿಎಂ ಬೊಮ್ಮಾಯಿ ಅವರಿಗೆ ಕಾಲು ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.