ಶೃಂಗೇರಿ: ಶಾರದಾಂಬೆಯ ದರ್ಶನ ಪಡೆದ ಸಿಎಂ
ಶೃಂಗೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಿ ಶಾರದಾ ದೇವಿಯ ದರ್ಶನ ಪಡೆದರು. ನಂತರ ಶ್ರೀ ಭಾರತೀತೀರ್ಥ ಸ್ವಾಮೀಜಿ, ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿಎನ್ ಜೀವರಾಜ್, ಶಾಸಕ ರಾಜೇಗೌಡ ಮತ್ತು ಇತರರು ಉಪಸ್ಥಿತರಿದ್ದರು.